Friday | March 20, 2026 |

ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ 1,227 ಸೀಟು ಮರಳಿಸಿದ ಬಿಜೆಪಿ ಸರ್ಕಾರ

Support THE-FILE

spot_img

ಬೆಂಗಳೂರು; ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶ ಪ್ರಕ್ರಿಯೆ ಮುಗಿದ ನಂತರ ಉಳಿಯುವ ವೈದ್ಯಕೀಯ ಸೀಟುಗಳನ್ನು ವೈದ್ಯಕೀಯ ಕಾಲೇಜುಗಳಿಗೆ ಹಿಂತಿರುಗಿಸುವಲ್ಲಿ ದೊಡ್ಡ ಮಟ್ಟದ ಭ್ರಷ್ಟಾಚಾರ ಬಿಜೆಪಿ ಸರ್ಕಾರದ ಅವಧಿಯಲ್ಲಿಯೂ ಮುಂದುವರೆದಿದೆ. 2019-20 ಮತ್ತು 2020-21ನೇ ಸಾಲಿನಲ್ಲಿ ನಡೆದಿದ್ದ ವೈದ್ಯಕೀಯ ಸೀಟು ಹಂಚಿಕೆಯ ಕೌನ್ಸೆಲಿಂಗ್‌ ಪ್ರಕ್ರಿಯೆ ಮುಕ್ತಾಯವಾದ ನಂತರ ಕಾಂಗ್ರೆಸ್‌ ಮುಖಂಡ ಶಾಮನೂರು ಶಿವಶಂಕರಪ್ಪ, ಆದಿಚುಂಚನಗಿರಿ, ಮುರುಘಾ ಮಠ ಸೇರಿದಂತೆ ಪ್ರಭಾವಿ ಖಾಸಗಿ ಮೆಡಿಕಲ್‌ ಕಾಲೇಜುಗಳಿಗೆ 1,227 ಸೀಟುಗಳನ್ನು ಹಿಂದಿರುಗಿಸಲಾಗಿದೆ.

ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶ ಪ್ರಕ್ರಿಯೆ ಮುಗಿದ ನಂತರ ಉಳಿಯುವ ವೈದ್ಯಕೀಯ ಸೀಟುಗಳನ್ನು ವೈದ್ಯಕೀಯ ಕಾಲೇಜುಗಳಿಗೆ ಹಿಂತಿರುಗಿಸುವಲ್ಲಿ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆದಿದೆ ಎಂದು ವಿಧಾನಪರಿಷತ್‌ ಸದಸ್ಯ ಎನ್‌ ರವಿಕುಮಾರ್‌ ಹಿಂದಿನ ಸರ್ಕಾರದ ವಿರುದ್ಧ ಆರೋಪಿಸಿದ್ದರು. ಆದರೀಗ ಬಿಜೆಪಿ ಸರ್ಕಾರದ 2 ವರ್ಷದ ಅವಧಿಯಲ್ಲಿಯೇ 27 ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ 1,227 ಸೀಟುಗಳನ್ನು ಹಿಂದಿರುಗಿಸಲಾಗಿರುವುದು ಮುನ್ನೆಲೆಗೆ ಬಂದಿದೆ.

2018-19ರಲ್ಲಿಯೂ ಉಳಿಕೆ ಸೀಟುಗಳನ್ನು ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಹಿಂದಿರುಗಿಸಿದ್ದನ್ನು ಸಿಒಡಿ ತನಿಖೆ ನಡೆಸಬೇಕು ಎಂದು ಎನ್‌ ರವಿಕುಮಾರ್‌ ಅವರು 2019ರ ಆಗಸ್ಟ್‌ 14ರಂದು ಅಂದಿನ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದರು. ಇದಕ್ಕೆ ಸ್ಪಂದಿಸಿದ್ದ ಯಡಿಯೂರಪ್ಪ ಅವರು ತನಿಖೆ ಕೈಗೊಂಡು ವರದಿ ಸಲ್ಲಿಸಿ ಎಂದು ವೈದ್ಯಕೀಯ ಶಿಕ್ಷಣ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದರು.

ಬಿಜೆಪಿ ಸರ್ಕಾರದ ಅವಧಿಯಲ್ಲಿಯೂ ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಸೀಟು ಹಿಂದಿರುಗಿಸುವ ದೊಡ್ಡ ಮಟ್ಟದ ಭ್ರಷ್ಟಾಚಾರವನ್ನೂ ವಿಧಾನಪರಿಷತ್‌ ಸದಸ್ಯ ಎನ್‌ ರವಿಕುಮಾರ್‌ ಅವರು ಈ ಬಾರಿಯೂ ಹೊರಗೆಳೆದಿದ್ದಾರೆ. 2018-19ರ ಅವಧಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ಪತ್ರ ಬರೆದಿದ್ದ ರವಿಕುಮಾರ್‌ ಅವರು ತನಿಖೆ ಸಂಬಂಧ ದನಿ ಎತ್ತದಿರುವುದು ಹಲವು ಅನುಮಾನಗಳಿಗೆ ದಾರಿಮಾಡಿಕೊಟ್ಟಿದೆ.

ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಸರ್ಕಾರ ವಾಪಸ್‌ ಪಡೆದು ಅರ್ಹ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸರ್ಕಾರದ ಕೋಟಾದಲ್ಲಿ ಕೌನ್ಸಲಿಂಗ್‌ ಮೂಲಕ ಹಂಚಿಕೆಯ ಆಯ್ಕೆ ಮಾಡಿಕೊಡುವ ಕುರಿತು ಬಿಜೆಪಿ ಸರ್ಕಾರ ತನ್ನ ನಿಲುವನ್ನು ವ್ಯಕ್ತಪಡಿಸಿಲ್ಲ.

ವಿಧಾನಪರಿಷತ್‌ ಸದಸ್ಯ ಎನ್‌ ರವಿಕುಮಾರ್‌ ಅವರು ಕೇಳಿದ್ದ ಪ್ರಶ್ನೆಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್‌ ಅವರು ನೀಡಿರುವ ಉತ್ತರದಲ್ಲಿ ಖಾಸಗಿ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಿಗೆ 1,227 ಸೀಟುಗಳನ್ನು ಹಿಂದಿರುಗಿಸಿರುವ ಮಾಹಿತಿ ಒದಗಿಸಿದ್ದಾರೆ.

ಕಾಂಗ್ರೆಸ್‌ನ ಪ್ರಭಾವಿ ಮುಖಂಡ ಡಾ ಶಾಮನೂರು ಶಿವಶಂಕರಪ್ಪ ಅವರ ಹೆಸರಿನಲ್ಲಿರುವ ಮೆಡಿಕಲ್‌ ಕಾಲೇಜು, ಚಿತ್ರದುರ್ಗ ಮುರುಘಾ ಮಠ ನಡೆಸುವ ಬಸವೇಶ್ವರ ಮೆಡಿಕಲ್‌ ಕಾಲೇಜು, ಆದಿಚುಂಚನಗಿರಿ ಮೆಡಿಕಲ್‌ ಕಾಲೇಜೂ ಸೇರಿದಂತೆ ಹಲವು ಖಾಸಗಿ ವೈದ್ಯಕೀಯ ಕಾಲೇಜುಗಳೂ ಈ ಪಟ್ಟಿಯಲ್ಲಿವೆ.

ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಹಿಂದಿರುಗಿಸಿರುವ ಪಟ್ಟಿ

ಡಾ ಬಿ ಆರ್‌ ಅಂಬೇಡ್ಕರ್‌ ಮೆಡಿಕಲ್ ಕಾಲೇಜು – 40 ಸೀಟು

ಖ್ವಾಜಾ ಬಂದೇ ನವಾಜ್‌ ಇನ್ಸಿಟಿಟ್ಯೂಟ್‌ ಆಫ್‌ ಮೆಡಿಕಲ್‌ ಸೈನ್ಸಸ್‌ ಗುಲ್ಬರ್ಗಾ- 31

ಎಂವಿಜೆ ಮೆಡಿಕಲ್ ಕಾಲೇಜು ರೀಸರ್ಚ್‌ ಆಸ್ಪತ್ರೆ ಚನ್ನಸಂದ್ರ, ಬೆಂಗಳೂರು- 59

ವೈದೇಹಿ ಇನ್ಸಿಟಿಟ್ಯೂಟ್‌ ಆಫ್‌ ಮೆಡಿಕಲ್‌ ಸೈನ್ಸ್‌ ಅಂಡ್‌ ರೀಸರ್ಚ್‌ ಸೆಂಟರ್‌ ಬೆಂಗಳೂರು- 59

ಎ ಜೆ ಇನ್ಸಿಟಿಟ್ಯೂಟ್‌ ಆಫ್‌ ಮೆಡಿಕಲ್‌ ಸೈನ್ಸ್‌ಸ್‌, ಮಂಗಳೂರು- 39

ಶ್ರೀ ಬಸವೇಶ್ವರ ಮೆಡಿಕಲ್‌ ಕಾಲೇಜು ಮತ್ತು ಆಸ್ಪತ್ರೆ, ಚಿತ್ರದುರ್ಗ- 21

ಆದಿಚುಂಚನಗಿರಿ ಇನ್ಸಿಟಿಟ್ಯೂಟ್‌ ಮೆಡಿಕಲ್ ಸೈನ್ಸ್‌ಸ್‌ ಬೆಳ್ಳೂರು, ಮಂಡ್ಯ- 27

ಅಲ್‌ ಅಮೀನ್‌ ಮೆಡಿಕಲ್‌ ಕಾಲೇಜು, ವಿಜಯಪುರ- 25

ಎಸ್‌ ನಿಜಲಿಂಗಪ್ಪ ಮೆಡಿಕಲ್‌ ಕಾಲೇಜು ರೀಸರ್ಚ್‌ ಸೆಂಟರ್, ಬಾಗಲಕೋಟೆ- 80

ಎಸ್‌ಡಿಎಂ ಕಾಲೇಜು ಆಫ್‌ ಮೆಡಿಕಲ್‌ ಸೈನ್ಸ್‌ಸ್‌ ಅಂಡ್‌ ಆಸ್ಪತ್ರೆ, ಧಾರವಾಡ – 14

ಮಹಾದೇವಪ್ಪ ರಾಂಪುರೆ ಮೆಡಿಕಲ್‌ ಕಾಲೇಜು, ಕಲ್ಬುರ್ಗಿ – 60

ನವೋದಯ ಮೆಡಿಕಲ್ ಕಾಲೇಜು, ರಾಯಚೂರು – 60

ವೆಂಕಟರಮಣ ಗೌಡ ಮೆಡಿಕಲ್‌ ಕಾಲೇಜು ಮತ್ತು ಆಸ್ಪತ್ರೆ ದಕ್ಷಿಣ ಕನ್ನಡ – 27

ಜಗದ್ಗುರು ಮುರುಘರಾಜೇಂದ್ರ ಮೆಡಿಕಲ್ ಕಾಲೇಜು, (ಜೆಜೆಎಂ) ದಾವಣಗೆರೆ – 98

ಶಾಮನೂರು ಶಿವಶಂಕರಪ್ಪ ಇನ್ಸಿಟಿಟ್ಯೂಟ್‌ ಆಫ್‌ ಮೆಡಿಕಲ್‌ ಸೈನ್ಸ್‌ಸ್‌ ದಾವಣಗೆರೆ – 60

ಸಪ್ತಗಿರಿ ಇನ್ಸಿಟಿಟ್ಯೂಟ್‌ ಆಫ್‌ ಮೆಡಿಕಲ್‌ ಸೈನ್ಸ್ಸ್‌ , ಬೆಂಗಳೂರು – 59

ಶ್ರೀನಿವಾಸ ಇನ್ಸಿಟಿಟ್ಯೂಟ್‌ ಆಫ್ ಮೆಡಿಕಲ್‌ ರೀಸರ್ಚ್‌ ಸೆಂಟರ್‌, ಮಂಗಳೂರು – 58

ಸುಬ್ಬಯ್ಯ ಇನ್ಸಿಟಿಟ್ಯೂಟ್‌ ಆಫ್‌ ಮೆಡಿಕಲ್‌ ಸೈನ್ಸ್‌ಸ್‌, ಶಿವಮೊಗ್ಗ -59

ಬಿಜಿಎಸ್‌ ಗ್ಲೋಬಲ್‌ ಇನ್ಸಿಟಿಟ್ಯೂಟ್‌ ಆಫ್‌ ಮೆಡಿಕಲ್‌ ಸೈನ್ಸ್‌ಸ್‌ ಕೆಂಗೇರಿ, ಬೆಂಗಳೂರು- 22

ಶ್ರೀದೇವಿ ಇನ್ಸಿಟಿಟ್ಯೂಟ್‌ ಆಫ್‌ ಮೆಡಿಕಲ್‌ ಸೈನ್ಸ್‌ ಮ್ತು ರೀಸರ್ಚ್‌ ಆಸ್ಪತ್ರೆ ತುಮಕೂರು- 55

ದಿ ಆಕ್ಸ್‌ಫರ್ಡ್‌ ಮೆಡಿಕಲ್‌ ಕಾಲೇಜು, ಆಸ್ಪತ್ರೆ ಮತ್ತು ರೀಸರ್ಚ್ ಕೇಂದ್ರ, ಬೆಂಗಳೂರು- 52

ಆಕಾಶ್‌ ಮೆಡಿಕಲ್‌ ಸೈನ್ಸ್‌ಸ್‌ ಅಂಡ್‌ ರೀಸರ್ಚ್‌ ಸೆಂಟರ್‌, ಬೆಂಗಳೂರು- 60

ಕಣಚೂರು ಇನ್ಸಿಟಿಟ್ಯೂಟ್‌ ಅಫ್‌ ಮೆಡಿಕಲ್‌ ಸೈನ್ಸ್‌ ರೀಸರ್ಚ್ ಸೆಂಟರ್‌, ಮಂಗಳೂರು-59

ಈಸ್ಟ್‌ ಪಾಯಿಂಟ್‌ ಕಾಲೇಜು ಆರ್ಪ್ ಮೆಡಿಕಲ್‌ ಸೈನ್ಸ್‌ಸ್‌ ರೀಸರ್ಚ್ ಸೆಂಟರ್‌, ಬೆಂಗಳೂರು- 58

ಡಾ ಚಂದ್ರಮ್ಮ ದಯಾನಂದ ಸಾಗರ್‌ ಇನ್ಸಿಟಿಟ್ಯೂಟ್‌ ಅಫ್‌ ಮೆಡಿಕಲ್‌ ಎಜುಕೇಷನ್, ರಾಮನಗರ- 23

2019-20ನೇ ಸಾಲಿನ ವೈದ್ಯಕೀಯ ಸೀಟುಗಳು ಹಂಚಿಕೆಯಾಗದೇ ಮಾಪ್‌ಅಪ್‌ ರೌಂಡ್‌ ಸುತ್ತಿನ ನಂತರ ಇತರೆ ಕೋಟಾದಡಿ ಒಟ್ಟು 530 ಸೀಟುಗಳು ಬಾಕಿ ಉಳಿದಿರುತ್ತವೆ. 2020-21ನೇ ಸಾಲಿನ ವೈದ್ಯಕೀಯ ಸೀಟುಗಳು ಹಂಚಿಕೆಯಾಗದೇ ಮಾಪ್‌ ಅಪ್‌ ರೌಂಡ್‌ ಸುತ್ತಿನ ನಂತರ ಇತರೆ ಕೋಟಾದಡಿ ಒಟ್ಟು 697 ಸೀಟುಗಳು ಬಾಕಿ ಉಳಿದಿರುವುದು ಸಚಿವ ಸುಧಾಕರ್‌ ಅವರು ನೀಡಿರುವ ಉತ್ತರದಿಂದ ತಿಳಿದು ಬಂದಿದೆ.

2091-20 ಮತ್ತು 2020-21ನೇ ಶೈಕ್ಷಣಿಕ ವರ್ಷದಲ್ಲಿ 1,227 ಸರ್ಕಾರಿ ಕೋಟಾದ ವೈದ್ಯಕೀಯ ಸೀಟುಗಳನ್ನು ಖಾಸಗಿಯವರಿಗೆ ಹಿಂತಿರುಗಿಸಿರುವುದು ಮತ್ತು 2021-22ರ ಶೈಕ್ಷಣಿಕ ವರ್ಷದಲ್ಲಿ ಶಿಕ್ಷಣ ಸಂಸ್ಥೆಗಳಿಂದ ಸರ್ಕಾರ ವಾಪಸ್‌ ಪಡೆದು ಅರ್ಹ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸರ್ಕಾರದ ಕೋಟಾದಲ್ಲಿ ಕೌನ್ಸಲಿಂಗ್‌ ಮೂಲಕ ಹಂಚಿಕೆಯ ಆಯ್ಕೆ ಮಾಡಿಕೊಡುವ ಕುರಿತು ಕೇಳಿದ್ದ ಪ್ರಶ್ನೆಗೆ ಸಚಿವ ಸುಧಾಕರ್‌ ಅವರು ಯಾವುದೇ ಉತ್ತರವನ್ನೂ ನೀಡಿಲ್ಲ.

ಎಂಬಿಬಿಎಸ್‌ ಸೀಟ್‌ಗೆ ಕನಿಷ್ಠ 1 ಕೋಟಿ ಗರಿಷ್ಠ 1.60 ಕೋಟಿ ಇದೆ. ಸ್ನಾತಕೋತ್ತರ ತರಗತಿಯ ಒಂದು ಸೀಟ್‌ಗೆ ಗರಿಷ್ಠ 3 ಕೋಟಿ ಕನಿಷ್ಠ 2 ಕೋಟಿ ರು.ಗಳನ್ನು ಖಾಸಗಿ ವೈದ್ಯಕೀಯ ಕಾಲೇಜುಗಳು ವಸೂಲು ಮಾಡುತ್ತವೆ ಎಂಬ ಆರೋಪಗಳು ಹಿಂದಿನಿಂದಲೂ ಕೇಳಿ ಬರುತ್ತಿವೆ. ಅಲ್ಲದೆ ಸರ್ಕಾರ ಹಿಂದಿರುಗಿಸಿರುವ ಸೀಟುಗಳನ್ನು ಖಾಸಗಿ ವೈದ್ಯಕೀಯ ಕಾಲೇಜುಗಳು ದುಬಾರಿ ದರಕ್ಕೆ ಬಿಕರಿ ಮಾಡುತ್ತವೆ ಎಂಬ ಆಪಾದನೆಯೂ ಇದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಸೀಟು ಹಂಚಿಕೆ ಮಾಡಲಾಗುತ್ತದೆ. ಈ ಖಾಸಗಿ ಕಾಲೇಜುಗಳು ವಿಧಿಸಿರುವ ಶುಲ್ಕ ಭರಿಸಲು ಶಕ್ತರಾಗದ ವಿದ್ಯಾರ್ಥಿಗಳು ಆ ಕಾಲೇಜುಗಳಲ್ಲಿ ಪ್ರವೇಶ ಪಡೆಯುವುದಿಲ್ಲ. ಹೀಗಾಗಿ ಸರ್ಕಾರಿ ಸೀಟುಗಳು ಅಲ್ಲಿಯೇ ಉಳಿಯುತ್ತವೆ. ಆ ನಂತರ ಈ ಸೀಟುಗಳನ್ನು ಕೋಟ್ಯಂತರ ರುಪಾಯಿಗೆ ಅನ್ಯ ರಾಜ್ಯಗಳ ವಿದ್ಯಾರ್ಥಿಗಳಿಗೆ ಮತ್ತು ಆರ್ಥಿಕವಾಗಿ ಶಕ್ತರಾಗಿರುವ ವಿದ್ಯಾರ್ಥಿಗಳಿಗೆ ಮಾರಾಟ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ.

Hot this week

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

ರೋಹಿತ್ ವೇಮುಲ ಕಾಯ್ದೆ; ವ್ಯಾಖ್ಯಾನಗಳು ಅಸ್ಪಷ್ಟ, ಕಾನೂನು ಬಲವಿಲ್ಲ, ವಿಧೇಯಕವೇ ಅಪೂರ್ಣ

ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು...

ಗ್ರಾಮಠಾಣ ಜಮೀನು ಅದಲು-ಬದಲು; ಆರ್ಥಿಕ ಇಲಾಖೆ ಆಕ್ಷೇಪ ಬದಿಗೊತ್ತಿ ಎಂ ಆರ್ ಸೀತಾರಾಂ ಕುಟುಂಬದ ಬೆನ್ನಿಗೆ ನಿಂತ ಸರ್ಕಾರ

ಬೆಂಗಳೂರು; ಸರ್ಕಾರಿ ಭೂಮಿಗೆ ರಸ್ತೆಯ ಸಂಪರ್ಕ ಹೊಂದಿಲ್ಲದಿರುವ, ರಸ್ತೆ ಸಂಪರ್ಕ ಕಲ್ಪಿಸದೇ...

ಅದಾನಿ ಎಸಿಸಿ ಲಿಮಿಟೆಡ್‌ನಿಂದ ಅಕ್ರಮ ಗಣಿಗಾರಿಕೆ; ನಿರ್ದೇಶಕರು, ಅಧಿಕಾರಿಗಳ ವಿರುದ್ಧ ಲೋಕಾ ತನಿಖೆಗೆ ಶಿಫಾರಸ್ಸು, ಕಡತಕ್ಕೆ ಧೂಳು

ಬೆಂಗಳೂರು;  ಕಲ್ಬುರ್ಗಿಯ ವಾಡಿಯಲ್ಲಿ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್ ಪ್ರೈವೈಟ್ ಲಿಮಿಟೆಡ್...

1,260 ಕೋಟಿ ಮೊತ್ತದ ಹಗರಣ; 3 ವರ್ಷವಾದರೂ ಕಾಣದ ತಾರ್ಕಿಕ ಅಂತ್ಯ, ತೆವಳಿದ ಲೋಕಾ ತನಿಖೆ

ಬೆಂಗಳೂರು;  1,260 ಕೋಟಿ ರು ಮೊತ್ತದಲ್ಲಿ  108 ಆರೋಗ್ಯ ಕವಚ ಆಂಬ್ಯುಲೆನ್ಸ್‌ಗಳನ್ನು...

Topics

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

ರೋಹಿತ್ ವೇಮುಲ ಕಾಯ್ದೆ; ವ್ಯಾಖ್ಯಾನಗಳು ಅಸ್ಪಷ್ಟ, ಕಾನೂನು ಬಲವಿಲ್ಲ, ವಿಧೇಯಕವೇ ಅಪೂರ್ಣ

ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು...

ಗ್ರಾಮಠಾಣ ಜಮೀನು ಅದಲು-ಬದಲು; ಆರ್ಥಿಕ ಇಲಾಖೆ ಆಕ್ಷೇಪ ಬದಿಗೊತ್ತಿ ಎಂ ಆರ್ ಸೀತಾರಾಂ ಕುಟುಂಬದ ಬೆನ್ನಿಗೆ ನಿಂತ ಸರ್ಕಾರ

ಬೆಂಗಳೂರು; ಸರ್ಕಾರಿ ಭೂಮಿಗೆ ರಸ್ತೆಯ ಸಂಪರ್ಕ ಹೊಂದಿಲ್ಲದಿರುವ, ರಸ್ತೆ ಸಂಪರ್ಕ ಕಲ್ಪಿಸದೇ...

ಅದಾನಿ ಎಸಿಸಿ ಲಿಮಿಟೆಡ್‌ನಿಂದ ಅಕ್ರಮ ಗಣಿಗಾರಿಕೆ; ನಿರ್ದೇಶಕರು, ಅಧಿಕಾರಿಗಳ ವಿರುದ್ಧ ಲೋಕಾ ತನಿಖೆಗೆ ಶಿಫಾರಸ್ಸು, ಕಡತಕ್ಕೆ ಧೂಳು

ಬೆಂಗಳೂರು;  ಕಲ್ಬುರ್ಗಿಯ ವಾಡಿಯಲ್ಲಿ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್ ಪ್ರೈವೈಟ್ ಲಿಮಿಟೆಡ್...

1,260 ಕೋಟಿ ಮೊತ್ತದ ಹಗರಣ; 3 ವರ್ಷವಾದರೂ ಕಾಣದ ತಾರ್ಕಿಕ ಅಂತ್ಯ, ತೆವಳಿದ ಲೋಕಾ ತನಿಖೆ

ಬೆಂಗಳೂರು;  1,260 ಕೋಟಿ ರು ಮೊತ್ತದಲ್ಲಿ  108 ಆರೋಗ್ಯ ಕವಚ ಆಂಬ್ಯುಲೆನ್ಸ್‌ಗಳನ್ನು...

ಶೈಕ್ಷಣಿಕ ಸಂಯೋಜಕ ಹುದ್ದೆ; 88.06 ಕೋಟಿ ಹೊರೆ, ಅರ್ಹ 1,500 ಅತಿಥಿ ಉಪನ್ಯಾಸಕರ ಹುದ್ದೆ ಕಿತ್ತುಕೊಂಡಿತೇ?

ಬೆಂಗಳೂರು; ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ದ  ನಿಗದಿತ ವಿದ್ಯಾರ್ಹತೆ ಹೊಂದದ...

ಅರಣ್ಯ ಜಮೀನಿನ ಖಾತೆ ಬದಲಾವಣೆ, ಅಸಮರ್ಪಕ ವರದಿ; ತಡವಾಗಿ ವಿಚಾರಣೆ, ನೋಟೀಸ್ ಜಾರಿ

ಬೆಂಗಳೂರು; ಭಾರತ ಸರ್ಕಾರದ ಅರಣ್ಯ ಸಚಿವಾಲಯದಿಂದ ಯಾವುದೇ ಪೂರ್ವಾನುಮತಿ ಪಡೆಯದೇ ಅಂದಾಜು...

ಸಾಮಾಜಿಕ ಭದ್ರತಾ ಯೋಜನೆ; ಖರ್ಚಾಗದ ಪೂರ್ಣ ಅನುದಾನ, 676.16 ಕೋಟಿ ಉಳಿಕೆ

ಬೆಂಗಳೂರು; ವೃದ್ಧಾಪ್ಯ, ಸಂಧ್ಯಾ ಸುರಕ್ಷಾ ಸೇರಿದಂತೆ ಒಟ್ಟಾರೆ 12 ಸಾಮಾಜಿಕ ಭದ್ರತಾ...

Related Articles

Popular Categories

error: Content is protected !!